ಚಿಗುರಿದ ಕನಸು
ಚಿಗುರಿದ ಕನಸು
ಟಿ.ಎಸ್.ನಾಗಾಭರಣ : ಕನ್ನಡದಲ್ಲಿ ಹೆಸರಾಂತ ನಿರ್ದೇಶಕರು. ರಂಗಭೂಮಿಯಲ್ಲೂ ಜನಪ್ರಿಯ. ೨೬ ವರ್ಷಗಳ ಸಿನಿಮಾ ವೃತ್ತಿಯಲ್ಲಿ ಮೂವತ್ತು ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಎಂಟು ರಾಷ್ಟ್ರೀಯ ಪ್ರಶಸ್ತಿ ಹಾಗೂ ೧೪ ರಾಜ್ಯ ಸರ್ಕಾರದ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಹೊಸ ಅಲೆ ಚಲನಚಿತ್ರಗಳಲ್ಲದೆ, ಕಮರ್ಷಿಯಲ್ ಸಿನಿಮಾಗಳಲ್ಲೂ ಅತ್ಯಂತ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದಾರೆ, ಜನುಮದ ಜೋಡಿ, ನಾಗಮಂಡಲ, ಚಿನ್ನಾರಿ ಮುತ್ತ ಅತ್ಯಂತ ಯಶಸ್ಸು ಪಡೆದ ಚಿತ್ರಗಳಾಗಿವೆ. ನಾಗಮಂಡಲ ೧೯೯೮ ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತು. ಮೂರು ಮಕ್ಕಳ ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಅವರ ನಿರ್ದೇಶನದ “ನಾವಿದ್ದೇವೆ ಎಚ್ಚರಿಕೆ” ಚಿತ್ರಕ್ಕೆ ರಾಜ್ಯ ಸರ್ಕಾರದ ಪ್ರಶಸ್ತಿ ಬಂದಿದೆ. ಅಲ್ಲದೆ ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದೆ. ನಾಗಾಭರಣ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.